News

ಬೆಂಗಳೂರು ಜಲ ಮಂಡಳಿಯಿಂದ ನಾಳೆ ಈ ಪ್ರದೇಶಗಳಲ್ಲಿ ನೀರಿನ ಅದಾಲತ್

Share It

ಬೆಂಗಳೂರು: ಜಲ ಮಂಡಳಿಯ ವಿವಿಧ ಉಪ ವಿಭಾಗಗಳಾದ ವಾಯುವ್ಯ-2, ವಾಯುವ್ಯ-4, ಕೇಂದ್ರ 1-2, ಈಶಾನ್ಯ-2, ಉತ್ತರ 1-2, ಉತ್ತರ 2-2, ದಕ್ಷಿಣ 1-2, ದಕ್ಷಿಣ 2–2, ನೈರುತ್ಯ-2, ನೈರುತ್ಯ-5, ಪೂರ್ವ 1-3 ಮತ್ತು ಪೂರ್ವ 2-3 ಉಪವಿಭಾಗಗಳಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದು ಕೊರತೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗುರುವಾರ ಬೆಳಿಗ್ಗೆ 9.30 ರಿಂದ 11 ಗಂಟೆಯವರೆಗೆ ನೀರಿನ ಅದಾಲತ್‍ ನೆಡೆಯಲಿದೆ.

ನೀರಿನ ಅದಾಲತ್ ಹೆಚ್.ಎಂ.ಟಿ ಪೀಣ್ಯ, ದಾಸರಹಳ್ಳಿ, ಪೀಣ್ಯ, ಲಿಂಗಧೀರನಹಳ್ಳಿ, ಅಂದರಹಳ್ಳಿ, ಹೆಗ್ಗನಹಳ್ಳಿ, ಕೊಟ್ಟಿಗೆಪಾಳ್ಯ, ಹೇರೋಹಳ್ಳಿ, ಫ್ರೇಜರ್‍ ಟೌನ್, ಮಚಲಿಬೆಟ್ಟ, ಪಿಳ್ಳಣ್ಣಗಾರ್ಡನ್ 1 ಮತ್ತು 2, ಕೆಂಪೇಗೌಡ ಟವರ್, ಕುಮಾರ ಪಾರ್ಕ್, ಜಯಮಹಲ್, ಸಂಜಯನಗರ, ನ್ಯೂ ಬಿ.ಇ.ಎಲ್. ರಸ್ತೆ, ಆರ್.ಟಿ.ನಗರ ಕಾವಲ್ ಬೈರಸಂದ್ರ, ಗಂಗಾನಗರ, ಆನಂದನಗರ, ಮನೋರಾಯನಪಾಳ್ಯ, ಸಿಂಗಾಪುರ, ವಿದ್ಯಾರಣ್ಯಪುರ, ಸಹಕಾರನಗರ, ಹೆಚ್.ಎಸ್.ಆರ್-1, ಕೋಡಿಚಿಕ್ಕನಹಳ್ಳಿ, ಬೊಮ್ಮನಹಳ್ಳಿ, ಕೂಡ್ಲು, ಬೇಗೂರು, ವಿ.ವಿ.ಪುರಂ, ಸುಧಾಮನಗರ-2, ಕೆಂಪೇಗೌಡ ನಗರ, ಜಗಜೀವನರಾಮ್ ನಗರ, ಚಾಮರಾಜಪೇಟೆ, ಬನಗಿರಿನಗರ, ಬಿ.ಎಸ್.ಕೆ-1 ಮತ್ತು 2, ಕುಮಾರಸ್ವಾಮಿ ಲೇಔಟ್, ಇಸ್ರೋ ಲೇಔಟ್, ಪೂರ್ಣ ಪ್ರಜ್ಞಾ ಲೇಔಟ್, ಪೂರ್ವ ವಿಲೇಜ್-2-1 ಮತ್ತು 2-2, ಕಾಡುಗೋಡಿ ವರ್ತೂರು, ಐ.ಎಸ್.ಪಿ.ಎಸ್. ಹೊರಮಾವು, ರಾಜಾಕೆನಲ್ ಸೇವಾಠಾಣೆಗಳ ವ್ಯಾಪ್ತಿಯಲ್ಲಿ ನೀರಿನ ಅದಾಲತ್ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಳಿಯ 24/7 ದೂರು ನಿರ್ವಹಣಾ ಕೇಂದ್ರದ ಸಹಾಯವಾಣಿ 1916ಗೆ ಕರೆ ಮಾಡಿ ದೂರುಗಳನ್ನು ದಾಖಲಿಸಬಹುದಾಗಿದೆ ಹಾಗೂ ವಾಟ್ಸ್ ಆಪ್ ಸಂಖ್ಯೆ 8762228888 ಸಂದೇಶದ ಮೂಲಕ ಸಹ ದೂರನ್ನು ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ಜಲ ಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.


Share It

You cannot copy content of this page