ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ/ ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರು ನಗರದ ಜಿಲ್ಲಾಧಿಕಾರಿಗಳ ಕಛೇರಿಯ 4 ನೇ ಮಹಡಿಯ ಕಂಟ್ರೋಲ್ ಸೆಂಟರ್ ನಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ.
ಬೆಂಗಳೂರು ನಗರ ಜಿಲ್ಲೆಯ, ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು/ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9019913319 ಅನ್ನು ಸಂಪರ್ಕಿಸಬಹುದಾಗಿದೆ.
ಜಾತಿ ಮತ್ತು ಆದಾಯದ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮವಹಿಸಲಾಗಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.