News

ಯುಗಾದಿ, ರಂಜಾನ್ ಹಬ್ಬಗಳ ಎಫೆಕ್ಟ್; ಎರಡು ಪಟ್ಟು ಏರಿಕೆಯಾದ ಬಸ್ ಟಿಕೆಟ್ ದರ

Share It

ಬೆಂಗಳೂರು: ವಾರಾಂತ್ಯದಲ್ಲಿ ಯುಗಾದಿ ಹಬ್ಬ ಹಾಗೂ ರಂಜಾನ್ ಹಬ್ಬವಿದ್ದು ಊರಿಗೆ ತೆರಳುವವರ ಸಂಖ್ಯೆಯೂ ಹೆಚ್ಚಿರುವುದನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಮಾಲೀಕರು ಟಿಕೆಟ್ ದರವನ್ನು ಹೆಚ್ಚಿಸಿದ್ದಾರೆ.

ಮಾ 29 ಯುಗಾದಿ ಹಬ್ಬದ ಅಮಾವಾಸ್ಯೆ ಭಾನುವಾರ ಚಾಂದ್ರಮಾನ ಯುಗಾದಿ, ಸೋಮವಾರ ರಂಜಾನ್, ಹೀಗೆ ಒಟ್ಟು ಮೂರು ದಿನಗಳ ಕಾಲ ರಜೆ ಸಿಗುತ್ತದೆ. ಹೀಗಾಗಿ ಮಾರ್ಚ್ 28 ರ ಶುಕ್ರವಾರ ರಾತ್ರಿ ಊರಿಗೆ ತೆರಳಲು ಜನರು ಸಿದ್ಧತೆ ನಡೆಸಿಕೊಂಡಿದ್ದು, ಆದರೆ ಖಾಸಗಿ ಬಸ್‌ಗಳಲ್ಲಿ ದುಪ್ಪಟ್ಟು ದರ ಏರಿಕೆ ಮಾಡಲಾಗಿದೆ. ಖಾಸಗಿ ಬಸ್ ಮಾತ್ರವಲ್ಲದೆ ಕೆಎಸ್‌ಆರ್‌ಟಿಸಿ ಬಸ್‌ಗಳ ದರದಲ್ಲೂ ಹೆಚ್ಚಳವಾಗಿದ್ದು, ಸಾಮಾನ್ಯ ದಿನಗಳಲ್ಲಿ ಇರುವ ದರಕ್ಕಿಂತ 200 ರಿಂದ 300 ರೂಪಾಯಿಗಳಷ್ಟು ಏರಿಕೆಯಾಗಿದೆ. ಖಾಸಗಿ ಬಸ್ ಗಳಲ್ಲಂತೂ ಎರಡು ಪಟ್ಟು ಹೆಚ್ಚಾಗಿದೆ ಇದಕ್ಕೆೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ ನಟರಾಜ್ ಶರ್ಮ ಮಾತನಾಡಿ, ದುಪ್ಪಟ್ಟು ದರ ಏರಿಕೆ ಮಾಡಿಲ್ಲ. ಶೇ 50 ರಿಂದ 60 ರಷ್ಟು ಮಾತ್ರ ದರ ಏರಿಕೆ ಮಾಡಿದ್ದೇವೆ. ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಖಾಸಗಿ ಬಸ್‌ನವರಿಗೆ ಒಂದು ರೂಪಾಯಿ ಕೂಡ ಮೀಸಲಿಡಲಿಲ್ಲ. ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಮಾಲೀಕರಿಗೆ ದೊಡ್ಡ ಮಟ್ಟದಲ್ಲಿ ಹೊಡೆತ ಬಿದ್ದಿದೆ. ರೋಡ್ ಟ್ಯಾಕ್ಸ, ಇನ್ಶುರೆನ್ಸ್, ಹೊಸ ಬಸ್ ಗಳ ಬೆಲೆ, ಸ್ಪೇರ್ ಪಾರ್ಟ್ಸ್ ಸೇರಿದಂತೆ ಪ್ರತಿಯೊಂದರ ದರ ಹೆಚ್ಚಾಗಿದೆ. ಹಾಗಾಗಿ ಹಬ್ಬಗಳ ವೇಳೆ ದರ ಏರಿಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ.


Share It

You cannot copy content of this page