ಬೆಂಗಳೂರು: ಬಿಡಿಎ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಶುಕ್ರವಾರ ನಡೆದ ಕಾರ್ಯಾಚರಣೆಯಲ್ಲಿ ವಿಶ್ವೇಶ್ವರಯ್ಯ ಬಡಾವಣೆಯ 7ನೇ ಬ್ಲಾಕ್ ನಲ್ಲಿ 24 ಕೋಟಿ ರೂಪಾಯಿ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ಗಿಡದಕೊನೇನಹಳ್ಳಿ ಗ್ರಾಮದ ಸರ್ವೆ ನಂ. 51 ರಲ್ಲಿನ 12 ಗುಂಟೆ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಶೆಡ್ ಅನ್ನು ತೆರವುಗೊಳಿಸಿ, ಸುಮಾರು 24 ಕೋಟಿ ಬೆಲೆ ಬಾಳುವ ಪ್ರದೇಶವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವಶಕ್ಕೆ ಪಡೆದಿದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕ, ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಗಿದೆ.