Education News

ಸಂತಕವಿ ಕನಕದಾಸರು, ತತ್ವಪದಕಾರರ ಅಧ್ಯಯನ ನೆಡೆಸುವವರಿಗೆ ಸಿಗಲಿದೆ ಒಂದೂವರೆಲಕ್ಷದ ಫೆಲೋಶಿಪ್

Share It

ಬೆಂಗಳೂರು: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ 2024-25ನೇ ಸಾಲಿನಲ್ಲಿ ಕಿರು ಅಧ್ಯಯನ ನೆಡೆಸುವವರಿಗೆ 1.5 ಲಕ್ಷದ ಫೆಲೋಶಿಪ್ ಘೋಷಿಸಿ ಅರ್ಜಿಗಳನ್ನು ಆಹ್ವಾನಿಸಿದೆ.

ಫೆಲೋಶಿಪ್ ಗಾಗಿ ಕನಕದಾಸರ ಮುಂಡಿಗೆ ಸಾಹಿತ್ಯ- ತಾತ್ವಿಕ ವಿವೇಚನೆ, ಕರ್ನಾಟಕ ತತ್ವಪದಗಳ ಚಾರಿತ್ರಿಕ ಅಧ್ಯಯನ, ಕನ್ನಡದಲ್ಲಿ ಅನುಭಾವ ಸಾಹಿತ್ಯ- ತಾತ್ವಿಕ ಅಧ್ಯಯನ, ಕನ್ನಡದಲ್ಲಿ ಕೀರ್ತನ ಸಾಹಿತ್ಯದ ಸಮಾಜ-ಸಾಂಸ್ಕೃತಿಕ ಅಧ್ಯಯನ ವಿಷಯಗಳ ಕುರಿತು ಅಧ್ಯಯನ ನಡೆಸಬೇಕಿದೆ. 12 ತಿಂಗಳ ಅವಧಿಯ ಈ ಅಧ್ಯಯನ ಯೋಜನೆಯ ಬಗ್ಗೆ ಆಸಕ್ತ ಯುವ ಸಂಶೋಧನಾರ್ಥಿಗಳು ತಮ್ಮ ವಿದ್ಯಾರ್ಹತೆ, ಸಂಶೋಧನೆಯ ಬಗೆಗಿನ ಅನುಭವ, ಆಸಕ್ತಿ ಕ್ಷೇತ್ರವನ್ನು ಒಳಗೊಂಡ ವಿವರಗಳನ್ನು ಹಾಗೂ ಆಯ್ಕೆ ಮಾಡಿಕೊಂಡ ವಿಷಯವನ್ನು ಕುರಿತು ಅಧ್ಯಯನ ವ್ಯಾಪ್ತಿ ಮತ್ತು ಆಕರ ಸಾಮಗ್ರಿಗಳನ್ನು ಒಳಗೊಂಡ ಸಂಕ್ಷಿಪ್ತ ಮಾಹಿತಿಯಿರುವ ಸಾರಲೇಖವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕಿದೆ.

ಆಸಕ್ತಿಯಿರುವ 20 ರಿಂದ 55 ವರ್ಷ ವಯಸುಳ್ಳ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಫೆಲೋಶಿಪ್ ಗಾಗಿ ಅರ್ಜಿಯನ್ನು ಅಧ್ಯಯನ ಕೇಂದ್ರ ಇ-ಮೇಲ್ ಗೆ ಅಥವಾ ಅಂಚೆ ಮೂಲಕ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಳಿಗಾಗಿ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ದೂರವಾಣಿ ಸಂಖ್ಯೆಗಳಾದ 080-22113147 ಹಾಗೂ 6364529319 ಗೆ ಸಂಪರ್ಕಿಸಬೇಕು. ಇ-ವಿಳಾಸವಾದ kanakaresearchcentre@gmail.com ಮತ್ತು ವೆಬ್ ಸೈಟ್ https://kanakadasaresearchcenter.karnataka.gov.in ಮೂಲಕ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಸಂತಕವಿ ಕನಕದಾಸ ಮತ್ತು ತತ್ವಪದಕಾರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ.ತ. ಚಿಕ್ಕಣ್ಣ ತಿಳಿಸಿದ್ದಾರೆ.


Share It

You cannot copy content of this page