ಗ್ರಾಮ ಪಂಚಾಯಿತಿ ಸಿಬ್ಬಂದಿಯ ಹಾಜರಾತಿ ಪುಸ್ತಕದ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದ ಪಿಡಿಒಗೆ ಹದಿನೈದು ಸಾವಿರ ರುಪಾಯಿ ದಂಡ ವಿಧಿಸಲಾಗಿದೆ.
ಚಿತ್ರದುರ್ಗದ ಚಳ್ಳಕೆರೆ ತಾಲ್ಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿನ ಸಿಬ್ಬಂದಿಗಳ ಹಾಜರಾತಿಗೆ ಸಂಬಂಧಿಸಿದಂತೆ ಆರ್ಟಿಐ ಅಡಿ ಮಾಹಿತಿ ಕೇಳಲಾಗಿತ್ತು .
ಈ ಮಾಹಿತಿಯನ್ನು ನೀಡಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹನುಮಂತ ಕುಮಾರ್ ನಿರಾಕರಿಸಿದ್ದರು.
ಅಧಿಕಾರಿಯ ಈ ನಿಲುವು ಪ್ರಶ್ನಿಸಿ ಅರ್ಜಿದಾರರು ಕರ್ನಾಟಕ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಮಾಹಿತಿ ಆಯೋಗವು ಹನುಮಂತಕುಮಾರ್ಗೆ 15 ಸಾವಿರ ರುಪಾಯಿ ದಂಡ ವಿಧಿಸಿದೆ.
ಆಯುಕ್ತ ಎಸ್.ಎಲ್. ಪಾಟೀಲ್ ಅವರು ಪ್ರತಿವಾದಿಗೆ ಮಾಹಿತಿ ನೀಡದ ಕಾರಣಕ್ಕೆ ದಂಡ ವಿಧಿಸಿದ್ದಾರೆ. ಈ ದಂಡದ ಮೊತ್ತವನ್ನು ಅವರ ವೇತನದಿಂದ ಪ್ರತಿ ತಿಂಗಳು 5 ಸಾವಿರ ರೂ ನಂತೆ ಕಡಿತಗೊಳಿಸಲು ಆದೇಶಿಸಿದ್ದಾರೆ.
ಹಾಗೆಯೇ ಅರ್ಜಿದಾರರಿಗೆ ಈ ಮಾಹಿತಿ ಒದಗಿಸುವಂತೆಯೂ ಆದೇಶಿಸಿ ಆಯೋಗ ಮೆಲ್ಮನವಿಯನ್ನು ವಿಲೇವಾರಿ ಮಾಡಿದೆ.