Agriculture Education News

ನಾಳೆ ಕೃಷಿ ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ

Share It

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ ಸಮಾರಂಭ ಮೇ 15 ರ ಬೆಳಗ್ಗೆ 11 ಘಂಟೆಗೆ ಜಿ.ಕೆ.ವಿ.ಕೆ. ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ಜರುಗಲಿದೆ.

ರಾಜ್ಯಪಾಲ ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಲಿದ್ದು, ಕೃಷಿ ಸಚಿವ ಹಾಗೂ ಕೃಷಿ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಎನ್. ಚಲುವರಾಯಸ್ವಾಮಿ ಘಟಿಕೋತ್ಸವ ಉಪಸ್ಥಿತರಿರಲಿದ್ದಾರೆ. ನವದೆಹಲಿಯ ಇಪ್ಕೋ ವ್ಯವಸ್ಥಾಪಕ ನಿರ್ದೆಶಕ ಡಾ. ಯು.ಎಸ್. ಅವಸ್ಥಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.  

59ನೇ ಘಟಿಕೋತ್ಸವದಲ್ಲಿ 2023-24 ಶೈಕ್ಷಣಿಕ ವರ್ಷದಲ್ಲಿ ತೇರ್ಗಡೆಯಾದ ಒಟ್ಟಾರೆ 1271 ವಿದ್ಯಾರ್ಥಿಗಳಿಗೆ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ವಿಷಯಗಳಲ್ಲಿ ಪದವಿ ಪ್ರದಾನ ಮಾಡಲಾಗಲಿದೆ. ಈ ವೇಳೆ 871 ವಿದ್ಯಾರ್ಥಿಗಳು ವಿವಿಧ ಸ್ನಾತಕ ಪದವಿಗಳನ್ನು, 311 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಹಾಗೂ 89 ವಿದ್ಯಾರ್ಥಿಗಳು ಡಾಕ್ಟೊರಲ್ ಪದವಿಗಳನ್ನು ಪಡೆಯಲಿದ್ದಾರೆ.


Share It

You cannot copy content of this page