ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಅಲರ್ಟ್ ಗಳನ್ನು ನೀಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮೇ 21ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅರ್ಲಟ್ ನೀಡಿದ್ದು, ಈ ಜಿಲ್ಲೆಗಳಿಗೆ ಮೇ 19ರಿಂದ 2 ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗದಲ್ಲಿ ಮೇ 20 ಮತ್ತು ಮೇ 21ರಂದು ಬಿರುಸಾಗಿ ವರ್ಷಧಾರೆಯಾಗಲಿರುವ ಹಿನ್ನೆೆಲೆಯಲ್ಲಿ ಆರೆಂಜ್ ಅಲರ್ಟ್ ಕೊಡಲಾಗಿದೆ ಎಂದಿದೆ.
ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಿತ್ರದುರ್ಗ, ಕೊಪ್ಪಳ, ಮುಂದಿನ 2 ದಿನ ಯೆಲ್ಲೋ ಅಲರ್ಟ್ ಇರಲಿದೆ. ಉಳಿದೆಡೆ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಈ ವೇಳೆ ಕೆಲ ಜಿಲ್ಲೆಗಳಲ್ಲಿ ಗಾಳಿ ವೇಗವೂ ಅಧಿಕವಾಗಿರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಧಾರಾಕಾರ ಮಳೆ:
ಇಂದು ಸಂಜೆ ನಗರದ ಹಲವಡೆ ಧಾರಾಕಾರ ಮಳೆಯಾಗಿದ್ದು, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್ ವೃತ್ತ, ಕೆಆರ್ ಮಾರ್ಕೆಟ್, ಮೆಜೆಸ್ಟಿಿಕ್, ಜಯನಗರ, ಚಾಮರಾಜಪೇಟೆ, ವಿಜಯನಗರ, ಚಂದ್ರಾಲೇಔಟ್ ರಾಜಾಜಿನಗರ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆೆ, ನಾಗರಬಾವಿ, ಆರ್ಆರ್ ನಗರ, ಉತ್ತರಹಳ್ಳಿ, ಮಲ್ಲೇಶ್ವರ, ಶೇಷಾದ್ರಿಪುರ, ಬಿಟಿಎಂ ಲೇಔಟ್, ಯಶವಂತಪುರ, ಪೀಣ್ಯ, ಮೈಕೋಲೇಔಟ್ ಹಾಗು ಬೊಮ್ಮನಹಳ್ಳಿ ಸೇರಿದಂತೆ ಹಲವಡೆ ಭಾರಿ ಮಳೆ ಆಗಿದೆ. ಕೆಲವು ಪ್ರದೇಶಗಳಲ್ಲಿ ರಸ್ತೆೆಯಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.