ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 2025-26ನೇ ಸಾಲಿಗೆ ಐಎಎಸ್ ಹಾಗೂ ಕೆಎಎಸ್ ಪರೀಕ್ಷೆಗಳ ಪೂರ್ವಬಾವಿ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ನಡೆಸಲಾಗುವ ಪ್ರವೇಶ ಪರೀಕ್ಷೆಯ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ. 22ರವರೆಗೆ ಅವಧಿ ವಿಸ್ತರಿಸಲಾಗಿದೆ.
2025ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐಎಎಸ್ ಹಾಗೂ ಕೆಎಎಸ್ ಪರೀಕ್ಷೆಗಳ ಪೂರ್ವಬಾವಿ ತರಬೇತಿ ನೀಡಲು ಮೇ. 5ರಂದು ಅಧಿಸೂಚನೆ ಹೊರಡಿಸಲಾಗಿತ್ತು ಹಾಗೂ ಅರ್ಜಿ ಸಲ್ಲಿಸಲು ಮೇ. 18ರವರೆಗೆ ಹಾಗೂ ಶುಲ್ಕ ಪಾವತಿಸಲು ಮೇ. 19ರವರೆಗೆ ಅವಕಾಶ ನೀಡಲಾಗಿತ್ತು.
ಅರ್ಜಿ ಸಲ್ಲಿಸಲಾಗುವ ಎಲ್ಲಾ ಅಭ್ಯಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಮೇ. 22ರ ಮಧ್ಯಾಹ್ನ 3ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.