News

ಮುಂದಿನ ಮುಂದಿನ ಮೂರ್ನಾಲ್ಕು ದಿನ ರಾಜ್ಯದಲ್ಲಿ ಭಾರಿ ಮಳೆ

Share It

ಬೆಂಗಳೂರು: ಬಂಗಾಳದ ಉಪ ಸಾಗರದಲ್ಲಿ ಮೇಲೆ ಸುಳಿಗಾಳಿ, ರಾಜ್ಯದ ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿದ್ದು, ಅರಬ್ಬಿ ಸಮುದ್ರದಲ್ಲಿ ಕೂಡ ಕುಸಿತ ಉಂಟಾಗಿದ್ದು ಈ ಕಾರಣಗಳಿಗೆ ರಾಜ್ಯದಲ್ಲಿ ಮುಂದಿನ ಮುಂದಿನ ಮೂರ್ನಾಲ್ಕು ದಿನಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಭಾರಿ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ನಿನ್ನೆ ರಾತ್ರಿಯಿಂದ ಕೆಂಗೇರಿಯಲ್ಲಿ ಅತ್ಯಧಿಕ 132 ಮಿ.ಮೀ. ಮಳೆ ದಾಖಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಕೋಲಾರ, ಯಾದಗಿರಿ, ಮೈಸೂರು, ಮಂಡ್ಯ, ಬೆಳಗಾವಿ, ಧಾರವಾಡ, ವಿಜಯಪುರ, ಕೊಡಗು, ಚಿಕ್ಕಬಳ್ಳಾಪುರ, ಹಾಸನ ಸೇರಿದಂತೆ 15 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಕಲಬುರಗಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಹಾವೇರಿ. ವಿಜಯನಗರ, ದಾವಣಗೆರೆ ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ ಎಂದು ತಿಳಿಸಿದೆ.

ಜನ ಜೀವನ ಅಸ್ತವ್ಯಸ್ತ:

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ನಿನ್ನೆ ಹಾಗೂ ಕಳೆದ ರಾತ್ರಿ ಧಾರಾಕಾರ ಮಳೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಗಾರು ಪೂರ್ವ ಮಳೆಗೆ ಕೆಲವೆಡೆ ಮರಗಳು ಉರುಳಿ ಬಿದ್ದಿದ್ದು, ವಿದ್ಯುತ್ ಸಂಪರ್ಕಕ್ಕೂ ಹಾನಿಯಾಗಿದೆ. ರಸ್ತೆ ಸಂಚಾರಕ್ಕೂ ತೊಂದರೆಯಾಗಿದೆ.


Share It

You cannot copy content of this page