Law News

ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಚಾರಣೆಯನ್ನು ಜುಲೈ10ಕ್ಕೆ ಮುಂದೂಡಿದ ನ್ಯಾಯಾಲಯ

Share It

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಪವಿತ್ರಾಗೌಡ ಸೇರಿದಂತೆ ಇತರೆ ಆರೋಪಿಗಳ ವಿಚಾರಣೆಯು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದ್ದು, ಜುಲೈ10ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜೈ ಶಂಕರ್ ಕಳೆದ ಬಾರಿ ವಿಚಾರಣೆಗೆ ನಟ ದರ್ಶನ್ ಗೈರಾಗಿದ್ದಕ್ಕೆ ಅಸಮಧಾನ ವ್ಯಕ್ತಪಡಿಸಿದರು. ಇನ್ನು ಇಂದಿನ ವಿಚಾರಣೆಗೆ ಎ3 ಆರೋಪಿ ಪವನ್, ಎ11 ನಾಗರಾಜು ಸೇರಿದಂತೆ ಇತರೆ ಕೆಲ ಆರೋಪಿಗಳು ಗೈರಾಗಿದ್ದರು. ಇಂದಿನ ವಿಚಾರಣೆಯ ವೇಳೆ ತನಿಖೆ ನಡೆಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು ಹೆಚ್ಚುವರಿ ಆರೋಪಪಟ್ಟಿ ಸಲ್ಲಿಕೆ ಮಾಡಿದರು. ಪವಿತ್ರಾ ಗೌಡಗೆ 15 ದಿನ ಹೊರರಾಜ್ಯಕ್ಕೆ ತೆರಳಲು ಅನುಮತಿಯನ್ನು ನೀಡಲಾಯಿತು.


Share It

You cannot copy content of this page