News

ಒಳಮಿಸಲಾತಿ ಸಮೀಕ್ಷೆ: ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಮಾಸ್ಟರ್ ತರಬೇತಿದಾರರ ನೇಮಕ

Share It

ಬೆಂಗಳೂರು: ಒಳಮಿಸಲಾತಿ ಸಮೀಕ್ಷೆಯ ಸಮಯದಲ್ಲಿ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಮಾಸ್ಟರ್ ತರಬೇತಿದಾರರನ್ನು ನೇಮಿಸಲಾಗಿದೆ.

ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗದ ವರದಿಯ ಪ್ರಕಾರ ಪರಿಶಿಷ್ಟ ಜಾತಿಯ/ಉಪ ಜಾತಿಗಳ ಒಳ ಮೀಸಲಾತಿ ಕುರಿತು ಸಮೀಕ್ಷೆಯು ಚಾಲ್ತಿಯಲ್ಲಿದ್ದು, ಈ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕರ ಸಮಸ್ಯೆ ಪರಿಹಾರಕ್ಕಾಗಿ ಮಾಸ್ಟರ್ ತರಬೇತಿದಾರರನ್ನು ನೋಡಲ್ ಅಧಿಕಾರಿಯಗಳನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಕೇಂದ್ರ ಕಛೇರಿಯ ಕಂಟ್ರೋಲ್ ರೂಮ್‌ನಲ್ಲಿ ಮಾಸ್ಟರ್ ತರಬೇತಿದಾರರು ಕಾರ್ಯನಿರ್ವಹಿಸಲಿದ್ದಾರೆ. ಸಾರ್ವಜನಿಕರು ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯ ಬಗ್ಗೆ ಯಾವುದೇ ಮಾಹಿತಿ ಬೇಕಾದಲ್ಲಿ ಬಿಬಿಎಂಪಿ ಸಹಾಯವಾಣಿ ಸಂಖ್ಯೆ 1533 ಕ್ಕೆ ಕರೆ ಮಾಡಿದ್ದಲ್ಲಿ ಅವರು ಮಾಹಿತಿ ನೀಡಲಿದ್ದಾರೆ, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದು ಪಾಲಿಕೆ ಆಡಳಿತ ವಿಭಾಗದ ವಿಶೇಷ ಆಯುಕ್ತ ನವೀನ್ ಕುಮಾರ್ ರಾಜು ತಿಳಿಸಿದ್ದಾರೆ.


Share It

You cannot copy content of this page