News

ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ನೂತನ ಬೆಂಗಳೂರು ಕಮಿಷನರ್ ಆಗಿ ನೇಮಕ

Share It

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದಲ್ಲಿ ನಗರ ಪೊಲೀಸ್ ಆಯಕ್ತರಾಗಿದ್ದ ಬಿ.ದಯಾನಂದ್ ಅಮಾನತುಗೊಂಡ ಬೆನ್ನಲ್ಲೇ ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಹಿನ್ನಲೆಯಲ್ಲಿ ಶುಕ್ರವಾರ ಸೀಮಂತ್ ಕುಮಾರ್ ಸಿಂಗ್ ನಗರದ 39ನೇ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಬಿಹಾರದ ರಾಂಚಿ ಮೂಲದ ಸೀಮಂತ್ ಕುಮಾರ್ ಸಿಂಗ್ 1970ರಲ್ಲಿ ಜನಿಸಿದ್ದು, 1996ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ ಹಿಂದೆ ರಾಜ್ಯದ ವಿವಿಧ ಜಿಲ್ಲೆೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಕೆಎಸ್‌ಆರ್‌ಪಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಸೀಮಂತ್ ಕುಮಾರ್ ಸಿಂಗ್‌ರನ್ನು ಕೆಲ ತಿಂಗಳ ಹಿಂದಷ್ಟೇ ಬಿಎಂಟಿಎಫ್ ಎಡಿಜಿಪಿಯನ್ನಾಗಿ ನೇಮಿಸಲಾಗಿತ್ತು.

ಪೊಲೀಸ್ ಆಯುಕ್ತರ ಅಮಾನತು ಸರಿಯಲ್ಲ:

ನಗರ ಪೊಲೀಸ್ ಆಯುಕ್ತರ ಹುದ್ದೆ ತುಂಬಾ ಪ್ರಭಾವಿ. ಇದರಿಂದಲೇ ಒಂದು ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ನಗರವನ್ನು ನಿರ್ವಹಿಸಬೇಕಿದೆ. ಈ ಹಿನ್ನಲೆಯಲ್ಲಿ ನಗರ ಪೊಲೀಸ್ ಆಯುಕ್ತರನ್ನು ಅಮಾನತುಗೊಳಿಸಿರುವುದು ಸರಿಯಲ್ಲ. ಸರ್ಕಾರದ ನಿರ್ಲಕ್ಷ್ಯಕ್ಕೆ ಪೊಲೀಸರ ತಲೆದಂಡ ತಪ್ಪು. ಹೀಗಾಗಿ ಕೂಡಲೇ ಬಿ.ದಯಾನಂದ್ ಅವರ ಅಮಾನತು ಆದೇಶ ಹಿಂಪಡೆಯಬೇಕು ಎಂದು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್‌ರಾವ್ ಎಕ್ಸ ಮೂಲಕ ಒತ್ತಾಯಿಸಿದ್ದಾರೆ.


Share It

You cannot copy content of this page