ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ರಚಿಸಲಾಗಿದ್ದ ಮರಣ ಪರಿಶೋಧನಾ ತಂಡವನ್ನು ಪುನರ್ ರಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.
ಆರ್ಜಿಐಸಿಬಿ ನಿರ್ದೇಶಕ ಮತ್ತು ಬಿಎಂಸಿಆರ್ಐ ವಿಭಾಗದ ಮುಖ್ಯಸ್ಥ ಡಾ. ಬಿ.ಎಲ್ ಶಶಿಭೂಷಣ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ, ಅವರ ಜತೆ 14 ಮಂದಿ ಸದಸ್ಯರು ಹಾಗೂ ಒಬ್ಬರು ಸದಸ್ಯ ಕಾರ್ಯದರ್ಶಿಯನ್ನು ನೇಮಿಸಿ ಆದೇಶಿಸಲಾಗಿದೆ.
ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯಮಟ್ಟದಲ್ಲಿ ಮರಣ ಕಾರಣಗಳು, ರೋಗಲಕ್ಷಣಗಳು, ಸಹರೋಗಗಳು, ಲಸಿಕಾಕರಣ, ಆಸ್ಪತ್ರೆಗೆ ದಾಖಲಾದ ದಿನಗಳ ವಿಶ್ಲೇಷಣೆ, ದಾಖಲಾತಿ ಮತ್ತು ವರದಿಯಲ್ಲಿನ ವಿಳಂಬ ಮುಂತಾದವುಗಳನ್ನು ಪರಿಶೀಲಿಸಿ, ವಿಶ್ಲೇಶಿಸಿ ಅಗತ್ಯ ಸೂಚನೆಗಳನ್ನು ಮತ್ತು ಸಲಹೆಗಳನ್ನು ನೀಡಲು, ಚಿಕಿತ್ಸಾ ಶಿಷ್ಟಾಚಾರವನ್ನು ಪಾಲನೆ ಮಾಡಲು ಹಾಗೂ ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸುವುದು ಸಮಿತಿಯ ಕಾರ್ಯ ಚಟುವಟಿಕೆಯಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.