News

ಸನಾತನ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನವಿದೆ: ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿ

Share It

ಬೆಂಗಳೂರು: ಭಾರತೀಯ ಸನಾತನ ಸಂಸ್ಕೃತಿ ವಿಶ್ವದ ಶೇಷ್ಠ ಸಂಸ್ಕೃತಿಯಾಗಿದ್ದು, ಇಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನವಿದೆ ಎಂದು ಮಂತ್ರಾಲಯ ಮಠದ ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

ಶುಕ್ರವಾರ ಜಯನಗರದ ಚಂದ್ರಗುಪ್ತಮೌರ್ಯ(ಶಾಲಿನಿ)ಆಟದ ಮೈದಾನದಲ್ಲಿ ರಕ್ಷಾ ಫೌಂಡೇಷನ್( ರಿ) 13ನೇ ವರ್ಷದ  ಸುಮಂಗಲಿಯರಿಂದ ಶ್ರೀ ಲಲಿತಾ ಸಹಸ್ರನಾಮ ಪೂಜೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಹಿಂದೂ ಪರಂಪರೆಯಲ್ಲಿ ಮಹಿಳೆಯರಿಗೆ ದೇವಸ್ಥಾನ ಪ್ರವೇಶ, ಪೂಜೆ ಮಾಡುವ ಹಕ್ಕು ನೀಡಲಾಗಿದೆ. ವೇದಗಳಲ್ಲಿ ಶ್ರೀಲಲಿತಾ ಸಹಸ್ರನಾಮದ ವಿಶೇಷತೆ, ಮಹಿಮೆ, ಉಪಾಸನೆ ಕುರಿತು ತಿಳಿಸಲಾಗಿದೆ. ಮಕ್ಕಳಿಗೆ ತಾಯಿಯ ಅನುಗ್ರಹ, ಪ್ರೀತಿ ಗಳಿಸುವುದು ಸರಳವಾಗಿದ್ದು, ಅದೇ ಲಲಿತಾ ಸಹಸ್ರನಾಮದ ತತ್ಪಾರ್ಯವವಾಗಿದೆ. ಹೀಗಾಗಿ ಸಮಸ್ತ ಲೋಕಕ್ಕೆ ಮಾತೃಸ್ವರೂಪಿಣಿಯಾದ ಶ್ರೀ ಲಲಿತಾದೇವಿಯ ಸಹಸ್ರನಾಮದಿಂದ ಸಕಲ ಸಂಕಷ್ಟಗಳು ನಿವಾರಣೆಯಾಗುತ್ತದೆ ಎಂದರು.

ಸುಪ್ರಿಂಕೋರ್ಟ್ ನ್ಯಾಯಧೀಶ ಅರವಿಂದ್ ಕುಮಾರ್ ಕಾರ್ಯಕ್ರಮದಲ್ಲಿ ಮಾತನಾಡಿ, ರಕ್ಷಾ ಫೌಂಡೇಷನ್ ಶಿಸ್ತುಬದ್ದ ಸಂಘಟನೆಯ ಮೂಲಕ ಸಮಾಜ ಸೇವೆ ಮಾಡುತ್ತಿದೆ. ಲಲಿತಾ ಸಹಸ್ರನಾಮ ಲಲಿತಾಂಬೆಯ ಪೂಜೆ ಮಾಡುವುದರಿಂದ ಸಂಕಷ್ಟಗಳು ನಿವಾರಣೆಯಾಗುತ್ತದೆ ಎಂದು ಪುರಾಣದಲ್ಲಿ ಉಲ್ಲೇಖವಿದೆ ಎಂದು ಹೇಳಿದರು.

ಶಾಸಕ ಸಿ.ಕೆ.ರಾಮಮೂರ್ತಿ ಮಾತನಾಡಿ, ರೈತ ಮತ್ತು ಸೈನಿಕ ದೇಶಕ್ಕೆ ಎರಡು ಕಣ್ಣುಗಳು ಇದ್ದಂತೆ ಮತ್ತು ದೇಶ, ರಾಜ್ಯ ಸುಭೀಕ್ಷೆಯಾಗಿರಬೇಕು ಮತ್ತು ನಾಡಿನ ಸಮಸ್ತ ಜನರು ಸುಖ, ಶಾಂತಿ ನೆಮ್ಮದ್ದಿಯಿಂದ ಬಾಳಬೇಕು ಮತ್ತು ಸಮಸ್ತ ಲೋಕ ಸುಖಿನೊ ಭವಂತು ಎಂಬಂತೆ ಲೋಕಕಲ್ಯಾಣಾರ್ಥಾಕ್ಕಾಗಿ ಶ್ರೀ ಲಲಿತಾ ಸಹಸ್ರನಾಮ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್ ರೆಡ್ಡಿ, ನಿಕಟಪೂರ್ವ ಬಿಬಿಎಂಪಿ ಸದಸ್ಯೆ ನಾಗರತ್ನರಾಮಮೂರ್ತಿ, ಚಲನಚಿತ್ರ ನಟಿ ಮಾಳವಿಕ ಅವಿನಾಶ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


Share It

You cannot copy content of this page