News

ಧರ್ಮಸ್ಥಳ ಅಪರಾಧ ಪ್ರಕರಣ: ಎಸ್‌ಐಟಿ ತನಿಖೆಯಲ್ಲಿ  ಸೌಜನ್ಯ ಪ್ರಕರಣ ಸೇರಿಸಿಲ್ಲ: ಪರಮೇಶ್ವರ್

Share It

ಬೆಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ಹೊಸದಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸೇರ್ಪಡೆಯಿಲ್ಲ. ಈಗ ದೂರು ನೀಡಿರುವ ಪ್ರಕರಣದ ಕುರಿತು ಮಾತ್ರ ತನಿಖೆಯಾಗುತ್ತದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ ಅವರು, ಎಸ್‌ಐಟಿಯ ಕಾರ್ಯಸೂಚಿಯಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸೇರಿಲ್ಲ. ಧರ್ಮಸ್ಥಳ ಪ್ರಕರಣದಲ್ಲಿ ದೂರಿನ ಆಧಾರದ ಮೇಲೆ ಪ್ರಾಥಮಿಕ ತನಿಖೆ ನಡೆಸಬೇಕೆಂದು ಬಯಸಿದ್ದೆವು. ಅಗತ್ಯವಿದ್ದರೆ, ತನಿಖೆಯನ್ನು ಉನ್ನತ ತನಿಖಾ ಸಂಸ್ಥೆಗೆ ಹಸ್ತಾಂತರಿಸುತ್ತೇವೆಂದೂ ಹೇಳಿದ್ದೆವು. ಇದೀಗ ಮುಖ್ಯಮಂತ್ರಿ, ನಾನು ಮತ್ತು ಪೊಲೀಸ್ ಮಹಾನಿರ್ದೇಶಕರು ಎಸ್‌ಐಟಿ ರಚಿಸಲು ನಿರ್ಧರಿಸಿದ್ದೇವೆ. ಪ್ರಣಬ್‌ ಮೊಹಂತಿ ಹಿರಿಯ ಅಧಿಕಾರಿಯಾಗಿದ್ದು, ಕಾಲಕಾಲಕ್ಕೆ ಡಿಜಿ ಮತ್ತು ಐಜಿಪಿ ಸಲೀಂ ಅವರಿಗೆ ವರದಿ ಮಾಡುವ ಎಸ್‌ಐಟಿಯ ನೇತೃತ್ವ ವಹಿಸುತ್ತೇವೆ. ಅಂತಿಮ ವರದಿಯನ್ನು ಸಹ ಅವರಿಗೆ ಸಲ್ಲಿಸಲಾಗುತ್ತದೆ ಎಂದು ಹೇಳಿದರು.


Share It

You cannot copy content of this page